ಈ ಘಟನೆ ನಡೆದದ್ದೇ ತಡ, ಧೋನಿ ತಮ್ಮ ಕೊನೆ ಪಂದ್ಯದ ಜ್ಞಾಪಕಾರ್ಥವಾಗಿ ಆ ಪಂದ್ಯದ ಚೆಂಡನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ. ಅವರು ನಿವೃತ್ತಿ ಪಡೆಯಲಿದ್ದಾರೆ ಎಂದೆಲ್ಲ ಚರ್ಚೆಗಳು ನಡೆದಿದ್ದವು. ಆದರೆ, ಮಾಜಿ ಕ್ರಿಕೆಟಿಗ ಹಾಗೂ ತಂಡದ ಕೋಚ್ ರವಿಶಾಸ್ತ್ರಿ ಈ ಊಹಾಪೋಹಗಳಿಗೆಲ್ಲ ತೆರೆ ಎಳೆದು ಧೋನಿ ಇನ್ನೂ ಒಂದಷ್ಟು ಕಾಲ ಆಡಲಿದ್ದಾರೆ ಎಂದು ಹೇಳಿದ್ದರು. ಆದರೂ, ಘಟನೆ ಕುರಿತ ಅನುಮಾನಗಳು ಮಾತ್ರ ನಿವಾರಣೆಯಾಗಿರಲಿಲ್ಲ. ಆದರೆ, ಅಂದು ತಾವು ಚೆಂಡನ್ನು ಪಡೆದದ್ದು ಏಕೆ ಎಂದು ಧೋನಿ ಸ್ವತಃ ಈಗ ಬಹಿರಂಗಪಡಿಸಿದ್ದಾರೆ.