ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಈ ವೇಳೆ ಮೈದಾನದಲ್ಲಿದ್ದ ನೀರನ್ನು ಸ್ವಚ್ಛಗೊಳಿಸಲು ಸಿಬ್ಬಂದಿಗಳಿಗೆ ಸಹಾಯ ಮಾಡಿ ಅರ್ಜುನ್ ಸುದ್ದಿಗೆ ಗ್ರಾಸವಾಗಿದ್ದರು. ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ದಂತಕಥೆಯ ಪುತ್ರನಾಗಿದ್ದರೂ ಸಿಬ್ಬಂದಿಗೆ ನೆರವು ನೀಡುವ ಮೂಲಕ ಲಾರ್ಡ್ಸ್ ಆಡಳಿತ ಮಂಡಳಿಯಿಂದಲೂ ಶ್ಲಾಘನೆಗೆ ಪಾತ್ರರಾಗಿದ್ದರು. ಇದೀಗ ಲಾರ್ಡ್ಸ್ ಮೈದಾನದ ಆವರಣದಲ್ಲಿ ಡಿಜಿಟಲ್ ರೇಡಿಯೋ ಸೆಟ್ ಗಳನ್ನು ಮಾರಾಟ ಮಾಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.