ಪರ್ತ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲೂ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿ, ಶೂನ್ಯಕ್ಕೆ ಔಟಾಗಿ ತಂಡಕ್ಕೆ ಆಸರೆಯಾಗಬೇಕಿದ್ದ ಸಮಯದಲ್ಲಿ ಕೈ ಕೊಟ್ಟ ರಾಹುಲ್ ವಿರುದ್ಧ ಟ್ವೀಟರಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.
ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 287 ರನ್ ಗಳ ಗುರಿ ಬೆನ್ನಟ್ಟಿದ ಸಮಯದಲ್ಲಿ ಉತ್ತಮ ಆರಂಭ ಒದಗಿಸಬೇಕಿದ್ದ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿ ತಂಡಕ್ಕೆ ಹೊರೆಯಾಗಿದ್ದರು. ಇದಕ್ಕೆ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿ ಕಾಲೆಳೆಯುತ್ತಿದ್ದಾರೆ.
ಇನ್ನು ಮುಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡಿ, ಕನ್ನಡಿಗ ಮಾಯಾಂಕ್ ಅಗರ್ವಾಲ್ ಗೆ ಸ್ಥಾನ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ.