ಮೆಲ್ಬರ್ನ್ : ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಬಲಗೊಳಿಸುವ ನಿಟ್ಟಿನಲ್ಲಿ ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮೂರನೇ ಟೆಸ್ಟ್ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೊಹ್ಲಿ, ಬೌಲಿಂಗ್ ಪ್ರದರ್ಶನ ಉತ್ತಮವಾಗಿದೆ. ಆದರೆ, ಬ್ಯಾಟಿಂಗ್ ವಿಭಾಗದಲ್ಲಿ ಭರವಸೆ ಬೆಳೆಸಿಕೊಳ್ಳಬೇಕಾಗಿದೆ. ಸ್ಕೂರ್ ಬೋರ್ಡ್ ಮೇಲೆ ರನ್ ಗಳ ಮೇಲೆ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಬೌಲರ್ ಏನೂ ಮಾಡಲು ಸಾಧ್ಯವಾಗದೆ ಪರದಾಡುವಂತಾಗುತ್ತದೆ ಎಂದಿದ್ದಾರೆ.
Advertisement