ಅಂತೆಯೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಇತರೆ ಆಟಗಾರರಿಗೆ ಹೋಲಿಕೆ ಮಾಡಿದರೆ ನನ್ನ ಪರಿಸ್ಥಿತಿ ಹೀನಾಯವಾಗಿದೆ ವಾರ್ನರ್ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಸ್ಮಿತ್ ನಾಯಕನಾಗಿ ಕಣ್ಣು ಮುಚ್ಚಿಕೊಂಡಿದ್ದೆ ಎಂದು ಹೇಳಿದ್ದಾರೆ. ಆ ಮೂಲಕ ಇಡೀ ಪ್ರಕರಣದ ಎಲ್ಲ ಹೊಣೆ ನನ್ನ ಮೇಲೆ ಬೀಳುತ್ತದೆ. ನಿಜಕ್ಕೂ ಈ ಪ್ರಕರಣವಾದ ಬಳಿಕ ಸಾಕಷ್ಚು ದಿನಗಳ ಕಾಲ ನಾನು ಸರಿಯಾಗಿ ನಿದ್ದೆ ಮಾಡಿಲ್ಲ. ನನ್ನ ಕೆಲಸದಿಂದಾಗಿ ತಂಡವನ್ನು ಮತ್ತು ಕ್ರಿಕೆಟ್ ಗೌರವ ಮತ್ತು ದೇಶದ ಘನತೆಗೆ ಚ್ಯುತಿ ತಂದಿದ್ದೇನೆ ಎಂಬ ಪಾಪ ಪ್ರಜ್ಞೆ ಕಾಡುತ್ತಿದೆ ಎಂದು ಬ್ಯಾಂಕ್ರಾಫ್ಟ್ ಹೇಳಿದ್ದಾರೆ.