ಗಾಯದ ಸಮಸ್ಯೆ: ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಯಿಂದ ಹೊರಗುಳಿದ ಝುಲನ್ ಗೋಸ್ವಾಮಿ

ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.
ಝುಲನ್ ಗೋಸ್ವಾಮಿ
ಝುಲನ್ ಗೋಸ್ವಾಮಿ
ಪೊಟ್ಚೆಸ್ಟ್ರೋಮ್ (ದಕ್ಷಿಣ ಆಫ್ರಿಕಾ): ಗಾಯದ ಸಮಸ್ಯೆಯ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಮಹಿಳಾ ಕ್ರಿಕೆಟ್ ಸರಣಿಯಿಂದ ಭಾರತ ತಂಡದ ಹಿರಿಯ ಆಟಗಾರ್ತಿ ಝುಲನ್ ಗೋಸ್ವಾಮಿ ಹೊರಗುಳಿಯಲಿದ್ದಾರೆ.
ಗೋಸ್ವಾಮಿಯವರಿಗೆ ಕಾಲಿನ  ಭಾಗದಲ್ಲಿ ಗಾಯವಾಗಿದ್ದು ಸೋಮವಾರ ಅವರು ಎಂಆರ್ ಐ ಸ್ಕಾನ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿದೆ. ಮೂಳೆಗಳ ಮೇಲಿನ ಯಾವ ಹೆಚ್ಚಿನ ಒತ್ತಡ ತಪ್ಪಿಸುವ ಸಲುವಾಗಿ ಅವರಿಗೆ ಕಲ ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ  ಎಂದು ಬಿಸಿಸಿಐ ವೈದ್ಯಕೀಯ ತಂಡದೊಡನೆ ಮಾತನಾಡಿದ ಸ್ಥಳೀಯ ವೈದ್ಯರು ಹೇಳಿದ್ದಾರೆ.
ಆಫ್ರಿಕಾದಿಂದ ಹಿಂದಿರುಗಿದ ನಂತರ, ಗೋಸ್ವಾಮಿ ಕಾಲುಗಳ ತಜ್ಞರನ್ನು ಭೇಟಿಯಾಗಲಿದ್ದು ಬೆಂಗಳೂರಿನ ಎನ್ ಸಿಎ ನಲ್ಲಿ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿಂದೆ ನಡೆದ ಮೂರು ಪಂದ್ಯಗಳ ಮಹಿಳಾ ಏಕದಿನ ಸರಣಿಯಲ್ಲಿ ಗೋಸ್ವಾಮಿ ಐದು ವಿಕೆಟ್ ಗಳನ್ನು ಗಳಿಸಿದ್ದರು, ಸರಣಿಯಲ್ಲಿ ಭಾರತ 2-1 ಅಂತರದ ಜಯ ದಾಖಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com