ಭಾರತ ತಂಡದ ಮಾಜಿ ನಾಯಕ ಮತ್ತು ಅತ್ಯುತ್ತಮ ಫಿನಿಷರ್ ಎಂದು ಖ್ಯಾತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿಯನ್ನು ಕೆಳ ಕ್ರಮಾಂಕದಲ್ಲಿ ಆಡಿಸಲು ವಿರಾಟ್ ಕೊಹ್ಲಿ ಅವರ ಭಯ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ. ಸೆಹ್ವಾಗ್ ಅಭಿಪ್ರಾಯಪಟ್ಟಿರುವಂತೆ ಪ್ರಸ್ತುತ ಭಾರತ ತಂಡದಲ್ಲಿ ಉದಯೋನ್ಮುಖ ಆಟಗಾರರಿದ್ದರೂ, ತಂಡದಲ್ಲಿ ಉತ್ತಮ ಫಿನಿಷರ್ ಗಳಿಲ್ಲ. ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ ಕೊಹ್ಲಿ ಆಡಿಸುತ್ತಿದ್ದಾರೆ. ಆದರೆ ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ ಆಡಿಸಿದ ಮಾತ್ರಕ್ಕೆ ತಂಡ ಬ್ಯಾಟಿಂಗ್ ಆರ್ಡರ್ ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸುವಂತಿಲ್ಲ.