ಇನ್ನು ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಆಡುತ್ತಿರುವ ತಂಡದ ಮಾಜಿ ನಾಯಕ ಎಂಎಸ್ ಧೋನಿಗೂ ಸಹ ವಿಶ್ರಾಂತಿ ನೀಡಲಾಗುತ್ತಿದೆ. ಕೊಹ್ಲಿ ಮತ್ತು ಎಂಎಸ್ ಧೋನಿ ಸೇರಿದಂತೆ ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ಟಿ20 ತ್ರಿಕೋನ ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತದೆ ಎಂಬ ಮಾಹಿತಿ ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.