ಜಸ್ಪ್ರಿತ್ ಬೂಮ್ರಾ ಅವರ ಪ್ರದರ್ಶನದ ಬಗ್ಗೆ ರಾಷ್ಟ್ರಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗುಜರಾತ್ ವೇಗಿಗೆ ಈಗ ಒತ್ತಡದ ನಿರ್ವಹಣೆ ಅತ್ಯಂತ ಪ್ರಮುಖವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಬುಮ್ರಾ ಅವರದ್ದು ಅಪರೂಪದ ಬೌಲಿಂಗ್ ಶೈಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಮುಖ ಟೆಸ್ಟ್ ಸರಣಿಗಳಿಗೆ ಮಾತ್ರ ಆಡಿಸಬೇಕೆಂದು ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.