ಪ್ರಸಕ್ತ ಸಾಲಿನ ರಣಜಿ ಫೈನಲ್ ಪಂದ್ಯ ಇಂದೋರ್ ಕ್ರೀಡಾಂಗಣದಲ್ಲಿ ನಡೆದಿದ್ದು ದೆಹಲಿ ವಿರುದ್ಧ ವಿದರ್ಭ ತಂಡ ಗೆದ್ದು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಮಧ್ಯೆ ಪಂದ್ಯದಲ್ಲಿ ವಿದರ್ಭ ತಂಡದ ಬ್ಯಾಟ್ಸ್ ಮ್ಯಾನ್ ಗೆ ಬೌಲರ್ ಎಸೆದ ಚೆಂಡು ತಗುಲಿ ಕೆಳಗೆ ಬಿದ್ದು ನೋವಿನಿಂದ ನರಳುತ್ತಿದ್ದಾಗ ಮೈದಾನದಲ್ಲಿದ್ದ ದೆಹಲಿ ಆಟಗಾರರು ಆತನ ಹತ್ತಿರ ಸುಳಿಯದೆ ತಮ್ಮ ಪಾಡಿಗೆ ಸುಮ್ಮನಾಗಿದ್ದು ದೆಹಲಿ ತಂಡದ ಆಟಗಾರರ ಕ್ರೀಡಾ ಸ್ಪೂರ್ತಿ ಮರೆತು ನಡೆದುಕೊಂಡಿದ್ದಾರೆ ಎಂದು ನೆಟಿಜನ್ಸ್ ಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.