ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರೂ ನಮ್ಮನ್ನು ಅಭಿನಂದಿಸುತ್ತಾರೆ ಆದರೆ ನಮ್ಮ ಕುಟುಂಬಗಳನ್ನು ನಡೆಸಲು ನಮಗೆ ಯಾವುದೇ ಸಹಾಯ ಮಾಡುತ್ತಿಲ್ಲ ಎಂದರು. ಬೆಂಗಳೂರಿನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಗೆದ್ದಾಗ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಕರ್ನಾಟಕದ ಆಟಗಾರರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಸಾಧ್ಯವಾಗಿಲ್ಲ. ಕೇರಳ ಆಟಗಾರರಿಗೆ ಅಲ್ಲಿನ ಸರ್ಕಾರ ಸರ್ಕಾರಿ ಕೆಲಸ ನೀಡಿದೆ. ಪಾಕಿಸ್ತಾನದ ಆಟಗಾರರಿಗೂ ಅಲ್ಲಿನ ಸರ್ಕಾರ ಕೆಲಸವನ್ನು ನೀಡಿದೆ. ಆದರೆ ನಮ್ಮ ಸರ್ಕಾರ ಮಾತ್ರ ಯಾಕೋ ಮೀನಾಮೇಷ ಎಣಿಸುತ್ತಿದೆ ಎಂದು ಪ್ರಕಾಶ್ ಜಯರಾಮಯ್ಯ ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.