ಹೆಬ್ಬೆರಳು ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ವೇಗಿ ಜಸ್ ಪ್ರೀತ್ ಬುಮ್ರಾ ಈಗ ಏಕದಿನ ಸರಣಿಯಿಂದಲೂ ಔಟ್ ಆಗಿದ್ದಾರೆ.
ಜು.12 ರಿಂದ ಪ್ರಾರಂಭವಾಗುವ ಏಕದಿನ ಸರಣಿಯಿಂದ ಬುಮ್ರಾ ಹೊರಗುಳಿದಿದ್ದು, ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಜಸ್ ಪ್ರೀತ್ ಬುಮ್ರಾ ಹೆಬ್ಬೆರಳು ಗಾಯಕ್ಕೊಳಗಾಗಿದ್ದರು. ಜುಲೈ 4 ರಂದು ಬುಮ್ರಾ ಅವರಿಗೆ ಚಿಕಿತ್ಸೆ ಕೂಡ ನೀಡಲಾಗಿತ್ತು. ಆದರೆ ಚಿಕಿತ್ಸೆಯಿಂದ ಚೇತರಿಸಿಕೊಳ್ಳದ ಕಾರಣ, ಬುಮ್ರಾ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಭಾರತಕ್ಕೆ ಕಳುಹಿಸಲಾಗಿದೆ. ಹೀಗಾಗಿ ಬುಮ್ರಾ ಬದಲು ಶಾರ್ದೂಲ್ ಠಾಕೂರ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.