ಇಂತಹಾ ಬೆಚ್ಚಿ ಬೀಳುವ ಸುದ್ದಿಯೊಂದನ್ನು ಸ್ವತಃ ವೆಂಗ್ಸರ್ಕಾರ್ ಹೊರಹಾಕಿದ್ದಾರೆ. ಮುಂಬಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಇವರು 2008ರ ದಿನಗಳನ್ನು ನೆನೆಪಿಸಿಕೊಂಡರು. ಅಂಡರ್ 19 ವಿಶ್ವಕಪ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲು ನಾನು ಸೂಚಿಸಿದ್ದಾಗ ಅಂದಿನ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ತರಬೇತುದಾರ ಗ್ಯಾರಿ ಕರ್ಸ್ಟನ್ ಹಿಂಜರಿಕೆ ವ್ಯಕ್ತಪಡಿಸಿದ್ದರು ಎಂದಿದ್ದಾರೆ.