ಮೂಲಗಳ ಪ್ರಕಾರ ರವೀಂದ್ರ ಜಡೇಜಾ ಸೊಂಟದ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಅವರನ್ನು ಪರೀಕ್ಷಿಸಿರುವ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರವೀಂದ್ರ ಜಡೇಜಾ ಇರಾನ್ ಕಪ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಅವರ ಬದಲಿಗೆ ಮತ್ತೋರ್ವ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.