ತಂಡಕ್ಕೆ ಮರಳಿದ ಎಬಿಡಿ ವಿಲಿಯರ್ಸ್ ಆರ್ಸಿಬಿಗೆ ಆನೆ ಬಲ!

ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ...
ಎಬಿಡಿ ವಿಲಿಯರ್ಸ್
ಎಬಿಡಿ ವಿಲಿಯರ್ಸ್
ಬೆಂಗಳೂರು: ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ. 
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಎರಡನೇ ಹೈ ವೋಲ್ಟೇಜ್ ಪಂದ್ಯ ಆರಂಭಕ್ಕೂ ಮೊದಲೆ ಆರ್ಸಿಬಿ ತಂಡಕ್ಕೆ ಆನೆ ಬಲ ಬಂದಂತಾಗಿದ್ದು ಇನ್ನು ಸಂಪೂರ್ಣ ಫಿಟ್ನೆಸ್ ಪಡೆದಿರುವ ಎಬಿಡಿ ವಿಲಿಯರ್ಸ್ ತಂಡಕ್ಕೆ ಮರಳಲಿದ್ದಾರೆ ಎಂದು ತಂಡ ಕೋಚ್ ಡೇನಿಯಲ್ ವೆಟರಿ ಖಚಿತಪಡಿಸಿದ್ದಾರೆ. 
ಈ ನಡುವೆ ದಕ್ಷಿಣ ಆಫ್ರಿಕಾದ ಮತ್ತೋರ್ವ ಆಟಗಾರ ವಿಕೆಟ್ ಕೀಪರ್ ಎಡಗೈ ಬ್ಯಾಟ್ಸ್ ಮನ್ ಕ್ವಿಂಟನ್ ಡಿಕಾಕ್ ಖಾಸಗಿ ಕಾರಣದಿಂದಾಗಿ ತವರಿಗೆ ಮರಳುತ್ತಿದ್ದಾರೆ ಎಂದರು. 
ಪುಣೆಯಲ್ಲಿ ಶನಿವಾರದಂದು ನಡೆಯಲಿರುವ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com