ಆರ್‌ಸಿಬಿ ಅಂತೂ ಇಲ್ಲ; ನಾವು ಕನ್ನಡಿಗರೇ ನಮಗೆ ಸಪೋರ್ಟ್ ಮಾಡಿ: ಕೆಕೆಆರ್ ಆಟಗಾರ ಉತ್ತಪ್ಪ, ಕೃಷ್ಣ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು ಇದೀಗ ನಾಲ್ಕು ತಂಡಗಳು ಪ್ಲೇ ಆಫ್ ಹಂತಕ್ಕೆ ತಲುಪಿವೆ...
ರಾಬಿನ್ ಉತ್ತಪ್ಪ, ಪ್ರಸಿದ್ ಕೃಷ್ಣ
ರಾಬಿನ್ ಉತ್ತಪ್ಪ, ಪ್ರಸಿದ್ ಕೃಷ್ಣ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು ಇದೀಗ ನಾಲ್ಕು ತಂಡಗಳು ಪ್ಲೇ ಆಫ್ ಹಂತಕ್ಕೆ ತಲುಪಿವೆ. 
ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದ ಹೀನಾಯ ಸೋಲಿನಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಪ್ಲೇ ಆಫ್ ಹಂತಕ್ಕೆ ತಲುಪಲು ಸಾಧ್ಯವಾಗಿಲ್ಲ. ಇನ್ನು ರಾಜ್ಯದ ಹಲವು ಆಟಗಾರರು ಇತರ ತಂಡಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಡುತ್ತಿರುವ ರಾಬಿನ್ ಉತ್ತಪ್ಪ ಹಾಗೂ ಪ್ರಸಿಧ್ ಕೃಷ್ಣ ಅವರು ಕನ್ನಡಿಗರಲ್ಲಿ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. 
ಪ್ರಸಕ್ತ ಸಾಲಿನ ಐಪಿಎಲ್ ಪ್ಲೇ ಆಫ್ ನಲ್ಲಿ ಆರ್‌ಸಿಬಿ ತಂಡ ಇಲ್ಲ. ಹೀಗಾಗಿ ನಮಗೆ ಸಪೋರ್ಟ್ ಮಾಡಿ ಎಂದು ಇಬ್ಬರು ಆಟಗಾರರು ಕನ್ನಡದಲ್ಲೇ ಕನ್ನಡಿಗರನ್ನು ಕೇಳಿಕೊಂಡಿದ್ದಾರೆ. ಕೆಕೆಆರ್ ಪರ ರಾಬಿನ್ ಉತ್ತಪ್ಪ ಉತ್ತಮ ಬ್ಯಾಟಿಂಗ್ ನಲ್ಲಿ ಪ್ರಸಿಧ್ ಕೃಷ್ಣ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಪ್ರದರ್ಶನ ನೀಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com