ಭಾರತದ ಟ್ವೆಂಟಿ-20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಮಾನವೀಯತೆ ಮೆರೆಯುವ ಮೂಲಕ ಎಲ್ಲರ ಹೃದಯ ಗೆದ್ದಿದ್ದಾರೆ. ಭಾರತ-ಪಾಕ್ ನಡುವೆ ಭಾನುವಾರ ಪಂದ್ಯದ ವೇಳೆ ಮೈದಾನದಲ್ಲೇ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಹರ್ಮನ್ ಪ್ರೀತ್ ಕೌರ್ ಎತ್ತಿಕೊಂಡು ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಈ ಘಟನೆ ಅಲ್ಲಿ ನೆರೆದಿದ್ದ ಭಾರತೀಯ ಅಭಿಮಾನಿಗಳನ್ನು ಮಾತ್ರವಲ್ಲ ಬದಲಿಗೆ ಪಾಕಿಸ್ತಾನದ ಅಭಿಮಾನಿಗಳ ಹೃಗದಯವನ್ನೂ ಗೆದ್ದಿದೆ.