ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.
ಆಡಮ್ ಗಿಲ್ ಕ್ರೀಸ್ಟ್
ಆಡಮ್ ಗಿಲ್ ಕ್ರೀಸ್ಟ್

ಸಿಡ್ನಿ:  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು  ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್  ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಡಿಸೆಂಬರ್ 6 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, 2014ರ ಸರಣಿಯಂತೆ ವಿರಾಟ್ ಕೊಹ್ಲಿಯಿಂದ ಮತ್ತೊಂದು ನಿರೀಕ್ಷೆ  ಇಡಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಕೊಹ್ಲಿ ಜೊತೆ ಮಾತನಾಡಿದ್ದು, ಸಿಡ್ನಿಯಲ್ಲಿ ಅವರ ಬ್ಯಾಟಿಂಗ್ ಎದುರು ನೋಡುತ್ತಿದ್ದೇನೆ. ಒಂದು ವೇಳೆ ಅದು ಹಾಗದಿದ್ದರೆ  ಆಚ್ಚರಿಪಡುವುದಾಗಿ ಗಿಲ್ ಕ್ರೀಸ್ಟ್  ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ಈ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯವಿದೆ. ಅವರು ಸಹಕರಿಸಿದ್ದರೆ ಉತ್ತಮ ರನ್ ಗಳಿಸಬಹುದಾಗಿದೆ. ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ದಾಳಿ ನಡೆಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಬೌಲರ್ ಗಳಿಗೆ ಭಾರತದ  ಎಲ್ಲಾ ಬ್ಯಾಟ್ಸ್ ಮನ್ ಗಳ ಮೇಲೆ ದಾಳಿ ಮಾಡುವ ಸಾಮರ್ಥ್ಯವಿದೆ. ಧೀರ್ಘ ಅವಧಿಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿರುದ್ಧ ತಾಳ್ಮೆಯಿಂದ ಆಟವಾಡಬೇಕಾಗುತ್ತದೆ. ಭಾರತ ಆರಂಭದಲ್ಲಿ ಗೆದ್ದರೂ ನಂತರ ಆಸ್ಟ್ರೇಲಿಯಾದ ತವರೂ ನೆಲದಲ್ಲಿ ಪ್ರಾಬಲ್ಯ ಮೆರೆಯಲು ಸಾಧ್ಯವಿಲ್ಲ ಎಂದು ಗಿಲ್ ಕ್ರೀಸ್ಟ್  ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com