ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಮುಶರಫ್ ಧೋನಿ ಬಗ್ಗೆ ಕೇಳಿದ್ದ ಪ್ರಶ್ನೆಗೆ ತಾವು ನೀಡಿದ ಉತ್ತರವನ್ನ ಮೆಲುಕು ಹಾಕಿದ್ದಾರೆ. ಧೋನಿ ಬಿರುಸಿನ ಬ್ಯಾಟಿಂಗ್ ಗೆ ಮಾರು ಹೋಗಿದ್ದ ಮುಷರಫ್ ದಾದಾ ಬಳಿ ಬಂದು 'ನೀವು ಇವರನ್ನು ಎಲ್ಲಿಂದ ಹಿಡಿದುಕೊಂಡು ಬಂದಿರಿ? ಎಂಬ ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಯಾಗಿ ದಾದಾ, 'ವಾಘಾ ಗಡಿಯ ಸಮೀಪ ನಡೆದುಕೊಂಡು ಹೋಗುತ್ತಿದ್ದರು. ಅಲ್ಲಿಂದ ಎಳೆದು ತಂದೆ' ಎಂದು ನಗುಮುಖದಿಂದಲೇ ಉತ್ತರಿಸಿದ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.