ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಸನತ್ ಜಯಸೂರ್ಯ ಐಸಿಸಿ ಕೆಂಗಣ್ಣಿಗೆ ಗುರಿಯಾಗಿದ್ದೇಕೆ?

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ...
ಸನತ್ ಜಯಸೂರ್ಯ
ಸನತ್ ಜಯಸೂರ್ಯ
Updated on
ಕೊಲಂಬೋ: ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಹೌದು ಐಸಿಸಿ ಭ್ರಷ್ಟಾಚಾರ ನಿಗ್ರಹ ಜಯಸೂರ್ಯ ವಿರುದ್ಧ ಸಂಹಿತೆ ಉಲ್ಲಂಘನೆ ಆರೋಪದಡಿ ಎರಡು ಪ್ರಕರಣಗಳನ್ನು ದಾಖಲಿಸಿದೆ. ಐಸಿಸಿ ನೀತಿ ಸಂಹಿತೆ ವಿಧಿ 2.4.6 ಮತ್ತು 2.4.7ರ ಅಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ಪ್ರಕರಣಗಳನ್ನು ದಾಖಲಿಸಿದ್ದು ಯಾವ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಐಸಿಸಿ ಬಹಿರಂಗಪಡಿಸಿಲ್ಲ. 
ಐಸಿಸಿಯೊಂದಿಗೆ ಸಹಕರಿಸಲು ವಿಫಲ ಅಥವಾ ನಿರಾಕರಣೆ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕ ನಡೆಸುವ ತನಿಖೆಗೆ ಅಡ್ಡಿ ಅಥವಾ ವಿಳಂಬ ಮಾಡುವಿಕೆಗೆ ಸಂಬಂಧಿಸಿದಂತೆ ಆರೋಪ ಮಾಡಲಾಗಿದೆ ಎನ್ನಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜಯಸೂರ್ಯಗೆ ಐಸಿಸಿ ಅಕ್ಟೋಬರ್ 15ರಿಂದ ಎರಡು ವಾರಗಳ ಸಮಯ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com