ಹಲವು ದಿನಗಳ ಬಳಿಕ ತಂಡಕ್ಕೆ ಮರಳಿರುವ ರವೀಂದ್ರ ಜಡೇಜಾ ಅವರು ಆಡಿದ ಪಂದ್ಯದಲ್ಲೇ 4 ವಿಕೆಟ್ ಗಳನ್ನು ಪಡೆದು ಎದುರಾಳಿ ತಂಡ ಅಲ್ಪಮೊತ್ತಕ್ಕೆ ಆಲೌಟ್ ಆಗುವಂತೆ ಮಾಡಿದ್ದರು. ಇದರೊಂದಿಗೆ ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ 7 ವಿಕೆಟ್ ಗಳ ಜಯ ಸಾಧಿಸಲು ನೆರವಾಗಿದ್ದು ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನವಾಗಿದ್ದರು.