ಬೆಂಗಳೂರು: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ನಿನ್ನೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಬಗ್ಗೆ ವಿರಾಟ್ ಅವರು ನಮ್ಮ ಗೌರವಾನ್ವಿತ ರಾಷ್ಟ್ರಪತಿಯಿಂದ ನಾನು ಖೇಲ್ ರತ್ನ ಪ್ರಶಸ್ತಿ ಪಡೆದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದರು.
ಕೊಹ್ಲಿ ಟ್ವೀಟ್ ಗೆ ರವಿ ಚನ್ನಣ್ಣನವರ್ ರೀಟ್ವೀಟ್ ಮಾಡಿ ಅಭಿನಂದನೆಗಳು ವಿರಾಟ್ ಕೊಹ್ಲಿ ಎಂದು ಬರೆದು ಶುಭ ಹಾರೈಸಿದ್ದಾರೆ.