ಶುಕ್ರವಾರ ದುಬೈನಲ್ಲಿ ಏಷ್ಯಾಕಪ್ 2018ರ ಟೂರ್ನಿಯ ಫೈನಲ್ ಪಂದ್ಯದ ರೋಚಕ ಗೆಲುವಿನ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಮಹೇಂದ್ರ ಸಿಂಗ್ ಧೋನಿ ಅವರ ಕೊಡುಗೆಯನ್ನು ನೆನೆದರು. ಈ ವೇಳೆ ತಂಡದ ಯಶಸ್ಸಿನಲ್ಲಿ ಧೋನಿ ಪಾತ್ರವನ್ನು ಶ್ಲಾಘಿಸಿದ ರೋಹಿತ್ ಶರ್ಮಾ, ನಿಜಕ್ಕೂ ಧೋನಿ ಎವರ್ ಗ್ರೀನ್ ನಾಯಕ.. ಅವರ ನಾಯಕತ್ವದಲ್ಲಿ ನಾನು ಸಾಕಷ್ಟು ವರ್ಷ ಆಡಿದ್ದೇನೆ. ಸಾಕಷ್ಚು ವರ್ಷಗಳಿಂದ ಅವರ ನಾಯಕತ್ವವನ್ನು ನೋಡಿದ್ದೇನೆ. ನಿಜಕ್ಕೂ ಅವರು ಸ್ಪೂರ್ತಿದಾಯಕ ಆಟಗಾರ. ಇಡೀ ಟೂರ್ನಿಯಲ್ಲಿ ತಂಡಕ್ಕೆ ಅವರ ಪಾತ್ರ ಅತ್ಯಂತ ದೊಡ್ಡದು. ಧೋನಿ ಎಂತಹುದೇ ಪರಿಸ್ಥಿತಿ ಇದ್ದರೂ ಸೂಕ್ತ ಸಲಹೆ ನೀಡಿ ನಮ್ಮ ಮೇಲಿನ ಒತ್ತಡ ಕಡಿಮೆ ಮಾಡುತ್ತಿದ್ದರು. ನಿರ್ಧಾರ ಕೈಗೊಳ್ಳುವಾಗ ಅವರು ಒತ್ತಡಕ್ಕೆ ಒಳಗಾಗುವುದಿಲ್ಲ ಮತ್ತು ಸಾಕಷ್ಚು ಯೋಚಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.