ವಿಶ್ವಕಪ್ ವಿಜೇತ ತಂಡ ಆಟಗಾರ ಯುವರಾಜ್ ಸಿಂಗ್‌ಗೆ ಮಾಡಿದ ಅವಮಾನವಿದು: ಗಂಭೀರ್

2011ರ ವಿಶ್ವಕಪ್ ವಿಜೇತ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಯುವರಾಜ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: 2011ರ ವಿಶ್ವಕಪ್ ವಿಜೇತ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಯುವರಾಜ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.
ಟೀಂ ಇಂಡಿಯಾದ ಆಲ್ರೌಂಡ್ ಯುವರಾಜ್ ಸಿಂಗ್ ಅವರನ್ನು ಐಪಿಎಲ್ ನಲ್ಲಿ ಕಡಿಮೆ ಬೆಲೆಗೆ ಖರೀದಿ ಮಾಡಿದ್ದು ಈ ಮೂಲಕ ಫ್ರಾಂಚೈಸಿಗಳು ಅವರಿಗೆ ಅವಮಾನ ಮಾಡಲಾಗಿದೆ ಎಂದರು.
ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಗಂಭೀರ್ ಅವರು ಹರಾಜು ಪ್ರಕ್ರಿಯೆ ವೇಳೆ ಯುವಿ ಅವರಿಗೆ ಮತ್ತಷ್ಟು ಬೆಲೆ ನೀಡಬಹುದಿತ್ತು. ಆ ಹಣಕ್ಕೆ ಅವರು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹಲವು ದಿನಗಳಿಂದ ಬ್ಯಾಟಿಂಗ್ ಫಾರ್ಮ್ ಹಾಗೂ ಫಿಟ್ನೆಸ್ ಕಾಯ್ದುಕೊಳ್ಳಲು ಶ್ರಮವಹಿಸುತ್ತಿದ್ದ ಯುವರಾಜ್ ಸಿಂಗ್ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com