ಸುಧೀಂದ್ರ ಶಿಂಧೆ
ಕ್ರಿಕೆಟ್
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಸುಧೀಂದ್ರ ಶಿಂಧೆ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ಹೊಸ ಹೆಸರುಗಳು ತಳುಕು ಹಾಕಿಕೊಳ್ಳುತ್ತಿದ್ದು, ಈಗ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ) ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ಹೊಸ ಹೆಸರುಗಳು ತಳುಕು ಹಾಕಿಕೊಳ್ಳುತ್ತಿದ್ದು, ಈಗ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ) ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ.
ಸುಧೀಂದ್ರ ಶಿಂಧೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ, ತರಬೇತುದಾರರಾಗಿದ್ದ ಇವರು ತಂಡದ ಮಾಲೀಕ ಅಶ್ಫಕ್ ಅಲಿ ಜೊತೆ ಸೇರಿಕೊಂಡು ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ