ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಿಂದ ಪಾಕಿಸ್ತಾನ ಬ್ಯಾನ್‌..! ಬಿಸಿಸಿಐ ಹೇಳಿದ್ದೇನು?

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಬೇಡ ಎಂಬ ಮಾತು ಜೋರಾಗಿ ಕೇಳಿ ಬರುತ್ತಿದ್ದು, ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮುಂಬೈ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಬೇಡ ಎಂಬ ಮಾತು ಜೋರಾಗಿ ಕೇಳಿ ಬರುತ್ತಿದ್ದು, ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲಗಳು, 'ಬಿಸಿಸಿಐ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಸುಪ್ರೀಂ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ (ಸಿಒಎ) ಈ ಸಂಬಂಧ ಶಶಾಂಕ್ ಮನೋಹರ್ ಗೆ ಪತ್ರದ ಕರಡು ಪ್ರತಿ ರೆಡಿ ಮಾಡಿದ್ದು ಐಸಿಸಿಗೆ ಮನವಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೆ, ಐಸಿಸಿಗೆ ಮಾಹಿತಿ ನೀಡುವ ಬಗ್ಗೆ ಸಿಒಎ ಮುಖ್ಯಸ್ಥ ವಿನೋದ್ ರಾಯ್ ಈ ಸಂಬಂಧ ಕಾನೂನು ಸಮಾಲೋಚನೆಗಳನ್ನು ಪಡೆದ ಬಳಿಕ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಯ್‌ ಒಪ್ಪಿಗೆ ಪಡೆದು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಕಚೇರಿಯಲ್ಲಿ ಈ ಕರಡು ಪತ್ರೆವನ್ನು ರೆಡಿ ಮಾಡಲಾಗಿದೆ ಎನ್ನಲಾಗಿದೆ.
ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿ ಬಳಿಕ, ವಿಶ್ವಕಪ್ ಸರಣಿಯಿಂದ ಪಾಕಿಸ್ತಾನ ತಂಡವನ್ನು ಬ್ಯಾನ್ ಮಾಡಬೇಕೆಂದು ಬಿಸಿಸಿಐ ಅಭಿಪ್ರಾಯ ಪಟ್ಟಿದ್ದು, ಈ ಕುರಿತು ಮನವಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಐಸಿಸಿಗೆ ಪತ್ರ ಕಳಿಸುವ ಬಗ್ಗೆ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಆದರೆ ಐಸಿಸಿಗೆ ಈ ಬಗ್ಗೆ ಯಾವುದೇ ಮೌಖಿಕ ಅಥವಾ ಅನಧಿಕೃತ ಸಂವಹನವನ್ನು ಬಿಸಿಸಿಐ ನೀಡಿಲ್ಲ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com