ಸಚಿನ್ ಗಿಂತ ವಿರಾಟ್ ಶ್ರೇಷ್ಠ; ಕ್ಯಾಪ್ಟನ್ ಕೊಹ್ಲಿ ಹೊಗಳುವ ಭರದಲ್ಲಿ ಪಾಂಡ್ಯ, ರಾಹುಲ್ ಎಡವಟ್ಟು!

ಭಾರತದ ಕ್ರಿಕೆಟ್ ದಂತಕಥೆ ಮತ್ತು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್​ ತೆಂಡೂಲ್ಕರ್ ಬಗ್ಗೆ ಮಾತನಾಡಿ ಕ್ರಿಕೆಟಿಗರಾದ ಕೆಎಲ್ ರಾಹುಲ್​​, ಹಾರ್ದಿಕ್ ಪಾಂಡ್ಯ ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಕ್ರಿಕೆಟಿಗರು
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಕ್ರಿಕೆಟಿಗರು
ಮುಂಬೈ: ಭಾರತದ ಕ್ರಿಕೆಟ್ ದಂತಕಥೆ ಮತ್ತು ಕ್ರಿಕೆಟ್ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್​ ತೆಂಡೂಲ್ಕರ್ ಬಗ್ಗೆ ಮಾತನಾಡಿ ಕ್ರಿಕೆಟಿಗರಾದ ಕೆಎಲ್ ರಾಹುಲ್​​, ಹಾರ್ದಿಕ್ ಪಾಂಡ್ಯ ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಬಾಲಿವುಡ್ ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರ ಕಾಫೀ ವಿತ್​ ಕರಣ್​ ಸೀಸನ್​ 6 ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಾರತ ತಂಡದ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯಾ ಇದೀಗ ಭಾರತೀಯ ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ತುತ್ತಾಗಿದ್ದಾರೆ. ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಈ ಜೋಡಿ ಸಚಿನ್ ತೆಂಡೂಲ್ಕರ್ ಗಿಂತ ಹಾಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ರೇಷ್ಠ ಆಟಗಾರ ಎಂದು ಹೇಳಿದ್ದಾರೆ.
ಟೀಂ ಇಂಡಿಯಾದ ಇಬ್ಬರು ಆಟಗಾರರಾದ ಸಚಿನ್​ ತೆಂಡೂಲ್ಕರ್​ ಹಾಗೂ ವಿರಾಟ್​ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಬ್ಯಾಟ್ಸ್​ಮನ್​ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ  ಸ್ವಲ್ಪವೂ ಯೋಚಿಸದೇ ರಾಹುಲ್ ಹಾಗೂ ಪಾಂಡ್ಯ ಕೊಹ್ಲಿ ಹೆಸರನ್ನು ಸೂಚಿಸಿದರು. ಇದು ಕ್ರಿಕೆಟ್​ ದೇವರು ಸಚಿನ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.​ ಹಲವಾರು ನೆಟ್ಟಿಗರು ಉಭಯ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದು, ಆಟದ ಬಗ್ಗೆ ಏನೂ ಗೊತ್ತಿಲ್ಲದೇ ಮಾತನಾಡಬೇಡಿ ಎಂದು ಕಿಡಿಕಾರಿದ್ದಾರೆ.
ಎಲ್ಲ ಕಾಲದಲ್ಲಿಯೂ ಸಚಿನ್​ ಓರ್ವ ಶ್ರೇಷ್ಠ ಆಟಗಾರ ಎಂದು ಕ್ರಿಕೆಟ್​ ದಂತಕತೆಗಳಾದ ವಿವಿಯನ್​ ರಿಚರ್ಡ್ಸ್​, ಡಾನ್​ ಬ್ರಾಡ್​ಮನ್, ಸುನಿಲ್​ ಗವಾಸ್ಕರ್​, ಬ್ರೆಟ್​ ಲಿ, ವಾಸಿಂ ಅಕ್ರಮ್​ ಹಾಗೂ ಗಂಗೂಲಿ ಮುಂತಾದ ಆಟಗಾರರೇ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.​ ಪ್ರತಿಯೊಬ್ಬ ನಿಜ ಆಟಗಾರನಿಗೆ ಗೊತ್ತು ಯಾರು ಉತ್ತಮ ಬ್ಯಾಟ್ಸಮನ್​ ಎಂದು ಟ್ವಿಟರ್​ ಬಳಕೆದಾರನೊಬ್ಬ ಅಸಮಾಧಾನ ಹೊರಹಾಕಿದ್ದರೆ, ಮತ್ತೊಬ್ಬ ಕೇವಲ ಟೀಂನಲ್ಲಿ ಉಳಿಯುವುದಕ್ಕೆ ಈ ರೀತಿಯ ಚೀಪ್​ ಗಿಮಿಕ್​ಗಳನ್ನು ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com