ಪ್ರಾಮಾಣಿಕವಾಗಿ ವಿಷಾದಿಸುತ್ತೇನೆ: ಬಿಸಿಸಿಐ ನೋಟಿಸ್ ಗೆ ಪಾಂಡ್ಯ ಉತ್ತರ

ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ....
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
Updated on
ನವದೆಹಲಿ: ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರು ಬುಧವಾರ ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.
ವಿವಾದಾತ್ಮಕ ಹೇಳಿಕೆ ಸಂಬಂಧ ಬಿಸಿಸಿಐ ಹಾರ್ದಿಕ್ ಪಾಂಡ್ಯಗೆ ಶೋಕಾಸ್ ನೋಟಿಸ್ ನೀಡಿ 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿತ್ತು. ಇಂದು ನೋಟಿಸ್ ಗೆ ಉತ್ತರಿಸಿರುವ ಪಾಂಡ್ಯ, ನನ್ನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗುತ್ತೇ ಎಂಬ ಅರಿವು ನನಗೆ ಇರಲಿಲ್ಲ. ನನ್ನ ಹೇಳಿಕೆ ಸೂಕ್ಷವಾದದ್ದು ಮತ್ತು ಅಗೌರವಯುತವಾದದ್ದು ಎಂಬುದನ್ನು ಅರಿತುಕೊಳ್ಳದೆ ಟಾಕ್ ಶೋನಲ್ಲಿ ಮಾತನಾಡಿದೆ. ಈ ಬಗ್ಗೆ ನಾನು ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಜೊತೆ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸ್ತ್ರೀದ್ವೇಷಿ ಹಾಗೂ ಕಾಮಪ್ರಚೋದಕ ಹೇಳಿಕೆ ನೀಡಿದ್ದರು.
ಪಾಂಡ್ಯ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಪಾಂಡ್ಯ ಕ್ಷಮೆಯಾಚನೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com