ಖ್ಯಾತ ಕ್ರಿಕೆಟ್ ಜಾಲತಾಣ ಕ್ರಿಕ್ ಬಜ್ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಹೀರ್ ಖಾನ್, ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದ ಮಾತ್ರಕ್ಕೇ ಅಂಬಾಟಿ ರಾಯುಡು ಇಂತಹ ಕಠಿಣ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಭಾವಿಸಿದ್ದೇನೆ. ಬಿಸಿಸಿಐ ಮತ್ತು ಆಯ್ಕೆ ಸಮಿತಿ ಸಾಕಷ್ಟು ಯೋಚನೆ ಮಾಡಿಯೇ ಆಟಗಾರರನ್ನು ಆಯ್ಕೆ ಮಾಡುತ್ತದೆ. ಹೀಗಾಗಿ ವಿಶ್ವಕಪ್ ತಂಡಕ್ಕೆ ಅಂಬಾಟಿ ರಾಯುಡು ಸ್ಟ್ಯಾಂಡ್ ಬೈ ಪ್ಲೇಯರ್ ಆಗಿದ್ದರೂ, ವಿಜಯ್ ಶಂಕರ್, ಕೇದಾರ್ ಜಾದವ್, ಮಯಾಂಕ್ ಅಗರ್ವಾಲ್ ಆಯ್ಕೆಯಲ್ಲಿ ನನಗೆ ಯಾವುದೇ ರೀತಿಯ ಅಚ್ಚರಿ ಕಾಣುತ್ತಿಲ್ಲ.