ವಿಶ್ವಕಪ್‌ನಿಂದ ಭಾರತ ಹೊರಕ್ಕೆ: ಕೊಹ್ಲಿ ಬದಲಿಗೆ ರೋಹಿತ್ ಶರ್ಮಾಗೆ ನಾಯಕ ಪಟ್ಟ?

ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ
Updated on
ಮುಂಬೈ: ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ, ಟಿ20 ಹಾಗೂ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. 
ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಮುಂದಾಗಿದೆ. ಇನ್ನು ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಗಸ್ಟ್ 3ರಿಂದ ಟಿ20 ಸರಣಿ ಆರಂಭಗೊಳ್ಳಲಿದ್ದು ತದನಂತರ ಏಕದಿನ ಸರಣಿ ಹಾಗೂ ಆಗಸ್ಟ್ 22ರಿಂದ ಟೆಸ್ಟ್ ಸರಣಿ ನಡೆಯಲಿದೆ. ವಿಂಡೀಸ್ ವಿರುದ್ಧ ಮೂರು ಟಿ20, ಮೂರು ಏಕದಿನ ಸರಣಿ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com