ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ...
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
Updated on
ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ನಡೆಯಬೇಕಿದ್ದ ಸುದ್ಧಿಗೋಷ್ಠಿಯೇ ರದ್ದಾಗಿದೆ.
ವೆಸ್ಟ್‌ ಇಂಡೀಸ್‌ ಪ್ರವಾಸ ತೆರಳುವ ಮುನ್ನ ಟೀಮ್‌ ಇಂಡಿಯಾ ಯಾವುದೇ ಸುದ್ದಿಗೋಷ್ಠಿ ಹಮ್ಮಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ಭಾನುವಾರ ಧೃಡಪಡಿಸಿವೆ. 
ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸುವುದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ, ಸಾಧ್ಯವಾಗಲಿಲ್ಲ. ಹಾಗಾಗಿ, ಕೆರಿಬಿಯನ್‌ ಪ್ರವಾಸಕ್ಕೂ ಮುನ್ನ ಯಾವುದೇ ಸುದ್ಧಿಗೋಷ್ಠಿ ಇಲ್ಲವೆಂದು" ಬಿಸಿಸಿಐ ಮೂಲಗಳು ಹೇಳಿವೆ. 
ಮೂರು ಪಂದ್ಯಗಳ ಟಿ-20, ಮೂರು ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆಡಲು ಭಾರತ ಸೋಮವಾರ ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com