''ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ '' ಟೀಂ ಇಂಡಿಯಾ ಗುಣಗಾನ ಮಾಡಿದ ಅಮಿಶ್ ಶಾ

ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ  ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ  ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್,  ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೊದಲಾದ ನಾಯಕರು  ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.
ಭಾರತೀಯ ತಂಡದಿಂದ  ಪಾಕಿಸ್ತಾನ ಮೇಲೆ ಮತ್ತೊಂದು ಸ್ಟ್ರೈಕ್ ಆಗಿದೆ. ಫಲಿತಾಂಶ ಒಂದೇ ಆಗಿದೆ. ಅದ್ಬುತಪ್ರದರ್ಶನ ತೋರಿದ ಎಲ್ಲಾ ಆಟಗಾರರನ್ನು ಅಭಿನಂದಿಸುವುದಾಗಿ  ಹೇಳಿರುವ ಅಮಿತ್ ಶಾ , ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ಪಡುತ್ತಿದ್ದು, ಗೆಲುವನ್ನು ಆಚರಿಸುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ. 
ಅತ್ಯಾದ್ಬುತ ಪಂದ್ಯವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಅದೇ ರೀತಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯೆಲ್ , ಕಿರಣ್ ರಿಜಿಜು,ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಮತ್ತಿತರ ಅನೇಕ ನಾಯಕರು ಟೀಂ ಇಂಡಿಯಾವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com