ಈ ಬಾರಿಯೂ ಕೈಕೊಟ್ಟ ಆರ್‌ಸಿಬಿ: ನಿರಾಸೆಗೊಂಡ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿಡಿ ಕೊನೆಯ ಸಂದೇಶ, ವಿಡಿಯೋ!

ಈ ಬಾರಿ ಕಪ್ ನಮ್ದೆ ಅನ್ನುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪಡೆ ತೀವ್ರ ನಿರಾಸೆ ಮೂಡಿಸಿದ್ದು ಇನ್ನು ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಕೊನೆಯ ಸಂದೇಶ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಈ ಬಾರಿ ಕಪ್ ನಮ್ದೆ ಅನ್ನುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪಡೆ ತೀವ್ರ ನಿರಾಸೆ ಮೂಡಿಸಿದ್ದು ಇನ್ನು ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಕೊನೆಯ ಸಂದೇಶ ನೀಡಿದ್ದಾರೆ.
ಆರ್‌ಸಿಬಿ ಅಭಿಮಾನಿಗಳು ನಿರಾಸೆಗೊಂಡಿರುವುದನ್ನು ಅರಿತ ವಿರಾಟ್ ಕೊಹ್ಲಿ ಮತ್ತು ಮಿ. 360 ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಧಿಕೃತ ಟ್ವೀಟರ್ ಖಾತೆಯಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಬಾರಿ ಆರ್‌ಸಿಬಿ ಅಭಿಮಾನಿಗಳು ತಂಡಕ್ಕೆ ನೆರವು ಹಾಗೂ ಪ್ರೋತ್ಸಾಹ ನೀಡಿದ್ದು ಅದಕ್ಕೆ ನಾವು ಅಭಾರಿ. ಬೆಂಗಳೂರಿನಲ್ಲಿ ನಡೆದ ಎಲ್ಲಾ ಪಂದ್ಯಗಳಿಗೂ ನೀವು ಪ್ರೋತ್ಸಾಹ ನೀಡಿದ್ದೀರಿ. ಆದರೆ, ತಂಡ ಈ ಆವೃತ್ತಿಯಲ್ಲಿ ನಿರೀಕ್ಷಿತ ಆಟವಾಡುವಲ್ಲಿ ವಿಫಲವಾಗಿದೆ. ಅದಕ್ಕೆ ನಾವು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇವೆ ಎಂದಿದ್ದಾರೆ.
ಇನ್ನು ಮುಂದಿನ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಸಮಾಧಾನಕರ ಮಾತುಗಳನ್ನು ಆಡಿದ್ದಾರೆ.
ಟೂರ್ನಿಯಲ್ಲಿ 14 ಪಂದ್ಯಗಳ ಪೈಕಿ 5 ಪಂದ್ಯಗಳ ಗೆಲುವಿನೊಂದಿಗೆ 11 ಅಂಕ ಪಡೆದಿರುವ ಆರ್‌ಸಿಬಿ 7ನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com