ಟಿ-20 ಸರಣಿಗಳು ಯುವ ಆಟಗಾರರಿಗೆ ಉತ್ತಮ ಅವಕಾಶ- ಮೊಹಮದುಲ್ಲಾ

ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಟಿ- 20 ಸರಣಿಗಳು ಉತ್ತಮ ಅವಕಾಶ ಎಂದು ಬಾಂಗ್ಲಾದೇಶ ನಾಯಕ ಮೊಹಮದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಮೊಹಮದುಲ್ಲಾ
ಮೊಹಮದುಲ್ಲಾ

ನವದೆಹಲಿ:  ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಟಿ- 20 ಸರಣಿಗಳು ಉತ್ತಮ ಅವಕಾಶ ಎಂದು ಬಾಂಗ್ಲಾದೇಶ ನಾಯಕ ಮೊಹಮದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಭಾರತ ವಿರುದ್ಧ ನಾಳೆ ನಡೆಯಲಿರುವ ಟಿ-20 ಸರಣಿ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯವನ್ನು   ಗೆಲ್ಲುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು, ಬಾಂಗ್ಲಾದೇಶದ ಆಟಗಾರರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.

ನಮ್ಮ ಆಟಗಾರರ ಬಗ್ಗೆ ನಮಗೆ ವಿಶ್ವಾಸವಿದೆ. ಉತ್ತಮ ರೀತಿಯಲ್ಲಿ ಆಡಲಿದ್ದಾರೆ ಎಂಬ ಭರವಸೆ ಹೊಂದಿದ್ದೇವೆ. ಅಂತಾರಾಷ್ಟ್ರೀಯ ಪಂದ್ಯ ಆಡಬೇಕಾದರೆ ಒತ್ತಡ ಇದ್ದೇ ಯಾವಾಗಲೂ ಇದ್ದೇ ಇರುತ್ತದೆ. ಅಮ್ ಅಮಿನ್ ಮರಳಿರುವುದು ಖುಷಿಯಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದರು.

ಈ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣ ತೀವ್ರಗೊಂಡಿದ್ದು, ನವೆಂಬರ್ 5ರವರೆಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಕಟ್ಟಡ ಕಾಮಗಾರಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೊಹಮದುಲ್ಲಾ, ವಾತಾವಾರಣಕ್ಕೆ ಹೊಂದಿಕೊಳ್ಳಲು ಆಟಗಾರರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com