ಮುಂಬೈ ವಿರುದ್ಧ ಆರ್‌ಸಿಬಿ ಮುಗ್ಗರಿಸಲು ನೆಹ್ರಾ ಕಾರಣನಾ? ಕೊಹ್ಲಿ ವಿರುದ್ದ ವ್ಯಾಪಕ ಟೀಕೆ, ಏನಿದು ವಿಡಿಯೋ!

ಸತತ ಆರು ಪಂದ್ಯಗಳ ಸೋಲಿನ ಬಳಿಕ ಏಳನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ತಂಡ ಕೊಂಚ ಭರವಸೆ ಮೂಡಿಸಿತ್ತು. ಆದರೆ 8 ಪಂದ್ಯದಲ್ಲೂ ಮುಂಬೈ ವಿರುದ್ಧ ಕೊಹ್ಲಿ ಪಡೆ ಮತ್ತೆ ಮುಗ್ಗರಿಸಿದೆ.
ಆಶಿಶ್ ನೆಹ್ರಾ-ವಿರಾಟ್ ಕೊಹ್ಲಿ
ಆಶಿಶ್ ನೆಹ್ರಾ-ವಿರಾಟ್ ಕೊಹ್ಲಿ
ಮುಂಬೈ: ಸತತ ಆರು ಪಂದ್ಯಗಳ ಸೋಲಿನ ಬಳಿಕ ಏಳನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ತಂಡ ಕೊಂಚ ಭರವಸೆ ಮೂಡಿಸಿತ್ತು. ಆದರೆ 8 ಪಂದ್ಯದಲ್ಲೂ ಮುಂಬೈ ವಿರುದ್ಧ ಕೊಹ್ಲಿ ಪಡೆ ಮತ್ತೆ ಮುಗ್ಗರಿಸಿದ್ದು ತಂಡದ ಸೋಲಿಗೆ ಬೌಲಿಂಗ್ ಕೋಚ್ ಆಶಿಶ್ ನೆಹ್ರಾ ಕಾರಣಾನಾ? ಈ ವಿಡಿಯೋವನ್ನು ಟ್ವೀಟ್ ಮಾಡುತ್ತಾ ನೆಟಿಗರು ನಾಯಕ ಕೊಹ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದ ವೇಳೆ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಬೌಲಿಂಗ್ ಕೋಚ್ ಆಶಿಶ್ ನೆಹ್ರಾ ನಿಯಂತ್ರಿಸುತ್ತಿರುವುದು ಕಂಡುಬಂದಿತ್ತು. ನಿರ್ಣಾಯಕ 19ನೇ ಓವರ್ ಪವನ್ ನೇಗಿಗೆ ನೀಡಲು ನೆಹ್ರಾ ಅವರೇ ಸಲಹೆ ಮಾಡುತ್ತಿದ್ದರು. 
ಆಶಿಶ್ ನೆಹ್ರಾ ಅವರ ಸಲಹೆಯನ್ನು ಚಾಚು ತಪ್ಪದೇ ಕೊಹ್ಲಿ ಅನುಸರಿಸುತ್ತಿದ್ದದ್ದೆ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವ್ಯಾಪಕ ಟ್ರೋಲ್ ಗಳು ಹರಿದಾಡುತ್ತಿದೆ. 19ನೇ ಓವರ್ ಅನ್ನು ಕೊಹ್ಲಿ ಬಲಗೈ ವೇಗಿ ನವದೀಪ್ ಸೈನಿಗೆ ನೀಡಲು ಮುಂದಾಗಿದ್ದರು. ಈ ಹಂತದಲ್ಲಿ ಸ್ಪಿನ್ನರ್ ಗೆ ನೀಡಲು ನೆಹ್ರಾ ಸೂಚಿಸಿದ್ದರು. ಪರಿಣಾಮ ಪವನ್ ನೇಗಿ ದಾಳಿಯಲ್ಲಿ 22 ರನ್ ಚಚ್ಚಿಸಿಕೊಂಡರು. ಇದರೊಂದಿಗೆ ಇನ್ನು ಒಂದು ಓವರ್ ಬಾಕಿ ಇರುವಂತೆ ಪಂದ್ಯದಲ್ಲಿ ಮುಂಬೈ ಗೆಲುವು ಸಾಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com