ಈ ಬಾರಿಯ ಐಪಿಎಲ್ನಲ್ಲಿ ರಹಾನೆ ನಾಯಕತ್ವದಲ್ಲಿ ಆರ್ಆರ್ ಕಳಪೆ ಪ್ರದರ್ಶನ ನೀಡಿದ್ದು, 8 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಜಯಗಳಿಸಿದೆ. ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಕಠಿಣ ಸಂದರ್ಭದಲ್ಲು ರಹಾನೆ ತಂಡವನ್ನ ಉತ್ತಮವಾಗಿ ಮುನ್ನಡೆಸಿದ್ದಾರೆ. ಆದರೆ ನಾಯಕನಾಗಿ ಸ್ಮಿತ್ ಉತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಅವರನ್ನು ಹೊಸ ನಾಯಕರಾಗಿ ನೇಮಕ ಮಾಡಲಾಗಿದೆ ಎಂದು ಆರ್ ಆರ್ ತಂಡದ ಮೂಲಗಳು ತಿಳಿಸಿವೆ. ಸದ್ಯ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಿಂದಲೇ ಸ್ಮಿತ್ ಆರ್ ಆರ್ ಸಾರಥ್ಯ ವಹಿಸಿ ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿದ್ದು, ತಂಡದ ನಿರ್ಧಾರಕ್ಕೆ ನ್ಯಾಯ ಒದಗಿಸಿದ್ದಾರೆ ಎನ್ನಲಾಗುತ್ತಿದೆ.