ಭಾನುವಾರ ರಾತ್ರಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ರಾಯಲ್ ಚಾಲೆಂಜರ್ಸ್ ವಿರುದ್ಧ ಕೇವಲ ಒಂದು ರನ್ ನಿಂದ ಸೋಲು ಅನುಭವಿಸಿತ್ತು. ಆದರೆ, ಇದಕ್ಕೂ ಮುನ್ನ 19ನೇ ಓವರ್ನಲ್ಲಿ ಧೋನಿ ಎರಡು ಬಾರಿ ಸಿಂಗಲ್ ರನ್ ತೆಗೆದುಕೊಳ್ಳುವ ಅವಕಾಶವಿದ್ದರೂ ನಿರಾಕರಿಸಿದ್ದರು. ಈ ಬಗ್ಗೆ ಮಾತನಾಡಿದ ಅವರು, “ಧೋನಿ ಸಿಕ್ಸರ್ ಸಿಡಿಸುವ ಮಿಷನ್ ಇದ್ದಂತೆ. ತಂಡದ ನಿರ್ಣಾಯಕ ಘಟ್ಟದಲ್ಲಿ ಬೌಂಡರಿ ಹಾಗೂ ಸಿಕ್ಸರ್ಗಳ ಅಗತ್ಯವಿದ್ದಾಗ ಅವರು ಲೆಕ್ಕಾಚಾರದ ಆಟಕ್ಕೆ ಮೊರೆ ಹೋಗುತ್ತಾರೆ. ಹಾಗಾಗಿ, ಅವರ ನಿರ್ಧಾರವನ್ನು ನಾವೆಂದೂ ಪ್ರಶ್ನೆ ಮಾಡುವ ಅಗತ್ಯವಿಲ್ಲ” ಎಂದರು.