ಕೊನೆಯ ಓವರ್ ನ ಅಂತಿಮ ಎಸೆತದಲ್ಲಿ ಚೆನ್ನೈಗೆ ಗೆಲ್ಲಲು 2 ರನ್ ಬೇಕಿತ್ತು. ಈ ವೇಳೆ ಧೋನಿ ಚೆಂಡನ್ನು ಮಿಸ್ ಮಾಡಿದ್ದರಿಂದ ಚೆಂಡು ನೇರವಾಗಿ ಕೀಪರ್ ಪಾರ್ಥಿವ್ ಪಟೇಲ್ ಕೈಸೇರಿತ್ತು. ಈ ವೇಳೆ 1 ರನ್ ತೆಗೆದುಕೊಂಡು ಪಂದ್ಯವನ್ನು ಡ್ರಾ ಮಾಡಲು ಧೋನಿ ಯತ್ನಿಸಿದ್ದರು. ಆದರೆ ಶಾರ್ದೂಲ್ ಠಾಕೂರ್ ಲೇಟಾಗಿ ಕ್ರೀಸ್ ಬಿಟ್ಟಿದ್ದರಿಂದ ಕೇವಲ 16 ಸೆ.ಮೀ ಅಂತರದಲ್ಲಿ ಪಾರ್ಥಿವ್ ರನೌಟ್ ಮಾಡಿದ್ದರು.