ಬುಧವಾರ ರಾತ್ರಿ ಚಿನ್ನಸ್ವಾಮಿ ಅಂಗಳದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 17 ರನ್ಗಳಿಂದ ಜಯ ಸಾಧಿಸಿದ ಬಳಿಕ ಮಾತನಾಡಿದ ಅವರು, " ಕಳೆದ 5 ಪಂದ್ಯಗಳಲ್ಲಿ 4ರಲ್ಲಿ ಜಯ ಸಾಧಿಸಿದ್ದೇವೆ. ಆದರೆ, ಕೊನೆಯ ಐದೂ ಪಂದ್ಯಗಳಲ್ಲಿಯೂ ಗೆಲುವು ಪಡೆಯಬೇಕಾಗಿತ್ತು. ಕ್ರಿಕೆಟ್ ಅನ್ನು ಖುಷಿಯಾಗಿ ಆಡುತ್ತಿದ್ದೇವೆ. ಕಳೆದ ರಾತ್ರಿ ನಡೆದ ಪಂದ್ಯ ಇದಕ್ಕೆ ಒಂದು ಉದಾಹರಣೆ. ನಮ್ಮ ತಂಡ ಬಲಿಷ್ಟವಾಗಿದ್ದು, ಒಂದು ತಂಡವಾಗಿ ಉತ್ತಮ ಕ್ರಿಕೆಟ್ ಆಡುವುದು ನಮ್ಮ ಗುರಿ" ಎಂದರು.