ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಖ್ಯಾತ ಕ್ರಿಕೆಟ್ ವಿಶ್ಲೇಷಕ ವೇಟೂರಿ ಶ್ರೀವತ್ಸ ಅವರು, ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾ ಸಾಕಷ್ಟು ಪ್ರಮುಖ ಟೂರ್ನಿಗಳಲ್ಲಿ ಪಾಲ್ಗೊಳ್ಳಲಿದೆ. ವಿಂಡೀಸ್ ಪ್ರವಾಸ, ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಇದ್ದು, ಈ ಮೂರು ಮಾದರಿಯ ಕ್ರಿಕೆಟ್ ಗೆ ಹೊಂದಿಕೊಳ್ಳುವ ತಂಡದ ಸಂಯೋಜನೆ ಮಾಡುವ ಕೋಚ್ ಅಗತ್ಯವಿದೆ. ಈಗಾಗಲೇ ಬಿಸಿಸಿಐ ಪ್ರಧಾನ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಸಾಕಷ್ಟು ನುರಿತ ಕ್ರಿಕೆಟಿಗರು ಅರ್ಜಿ ಸಲ್ಲಿಕೆಗೆ ಉತ್ಸಾಹ ತೋರಿದ್ದಾರೆ. ಹೀಗಿರುವಾಗ ಕೊಹ್ಲಿ ಅವರ ಇಂತಹ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.