ಇಂಡೋ-ವಿಂಡೀಸ್‌ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದು

ಇಲ್ಲಿನ ಪ್ರೋವಿಡೆನ್ಸ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ನಡೆಯಬೇಕಿದ್ದ ಮೊದಲನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಗಯಾನ: ಇಲ್ಲಿನ ಪ್ರೋವಿಡೆನ್ಸ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವೆ ನಡೆಯಬೇಕಿದ್ದ ಮೊದಲನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. 
ಇದಕ್ಕೂ ಮುನ್ನ ಟಾಸ್‌ ಗೆದ್ದಿದ್ದ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಫೀಲ್ಡಿಂಗ್‌ ಆಯ್ದುಕೊಂಡಿದ್ದರು. ಈ ವೇಳೆ ಮೈದಾನ ತೇವವಾಗಿದ್ದರಿಂದ ತೀರ್ಪುಗಾರರು ಪಂದ್ಯ ತಡವಾಗಿ ಆರಂಭಿಸಲು ನಿರ್ಧರಿಸಿದ್ದರು. 
ನಂತರ ತಡವಾಗಿ ಆರಂಭವಾದ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಪರ ಕ್ರಿಸ್‌ ಗೇಲ್‌ ಹಾಗೂ ಎವಿನ್‌ ಲೆವಿಸ್‌ ಕಣಕ್ಕೆ ಇಳಿದರು. ಈ ಜೊಡಿ ಮುರಿಯದ ಮೊದಲನೇ ವಿಕೆಟ್‌ಗೆ 42 ರನ್‌ ಗಳಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿತು. ಭಾರಿ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ಕ್ರಿಸ್‌ ಗೇಲ್‌ 31 ಎಸೆತಗಳಲ್ಲಿ ಕೇವಲ ನಾಲ್ಕು ರನ್ ಗಳಿಸಿದ್ದಾಗ ಕುಲ್ದೀಪ್‌ ಯಾದವ್‌ಗೆ ಕ್ಲೀನ್‌ ಬೌಲ್ಡ್ ಆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com