ರಣಜಿ: ಕರ್ನಾಟಕದ ಸಂಭಾವ್ಯ ತಂಡ ಪ್ರಕಟ

ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿ ಹಾಗೂ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಮೇಲೆ ಕಣ್ಣು ನೆಟ್ಟಿದ್ದು, ಸಂಭಾವ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ರಣಜಿ: ಕರ್ನಾಟಕದ ಸಂಭಾವ್ಯ ತಂಡ ಪ್ರಕಟ
ರಣಜಿ: ಕರ್ನಾಟಕದ ಸಂಭಾವ್ಯ ತಂಡ ಪ್ರಕಟ

ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿ ಹಾಗೂ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಮೇಲೆ ಕಣ್ಣು ನೆಟ್ಟಿದ್ದು, ಸಂಭಾವ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರರ ದಂಡೇ ಇದೆ. ಸೈಯದ್ ಮುಷ್ತಾಕ್ ಅಲಿ ಟಿ-20 ಟೂರ್ನಿ ಹಾಗೂ ವಿಜಯ್ ಹಜಾರೆಯಲ್ಲಿ ಅಮೋಘ ಪ್ರದರ್ಶನವನ್ನು ನೀಡಿದ ಆಟಗಾರರಿಗೆ ಮಣೆ ಹಾಕಲಾಗಿದೆ. ಸಂಭಾವ್ಯ ಪಟ್ಟಿಯಲ್ಲಿ ಮೂವರು ವಿಕೆಟ್ ಕೀಪರ್ ಗಳಿಗೆ ಅವಕಾಶ ಲಭಿಸಿದೆ. 

19 ವರ್ಷದೊಳಗಿನ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಶುಭಾಂಗ್ ಹೆಗ್ಡೆ ಹಾಗೂ ವಿದ್ಯಾಧರ್ ಪಾಟೀಲ್ ಅವರು ಸಹ ಸಂಭಾವ್ಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com