ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.
ಭುವನೇಶ್ವರ ಕುಮಾರ್
ಭುವನೇಶ್ವರ ಕುಮಾರ್

ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. 

ಡಿಸೆಂಬರ್ 15ರಿಂದ ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಗೊಳ್ಳಲಿದ್ದು ಈ ಸರಣಿಗೆ ಭುವನೇಶ್ವರ್ ಕುಮಾರ್ ಅಲಭ್ಯರಾಗಲಿದ್ದಾರೆ ಎಂಬ ವರದಿ ಸಿಕ್ಕಿದೆ.

ವಿಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭುವನೇಶ್ವರ ಕುಮಾರ್ ಆಡಿದ್ದರು. ಇದೀಗ ಅವರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com