ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ: ಸೌರವ್ ಗಂಗೂಲಿ

ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ನವದೆಹಲಿ: ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ. 

ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈ, ಗುಜರಾತ್ ನಲ್ಲಿ ಪಂದ್ಯಗಳನ್ನು ನಡೆಸಲು ಸೌರವ್ ಗಂಗೂಲಿ ಚಿಂತನೆ ನಡೆಸಿದ್ದಾರೆ. ಇನ್ನು ಸಂದರ್ಶನದ ವೇಳೆ ಮಾತನಾಡಿದ್ದ ಗಂಗೂಲಿ, ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸಲು ಬೇಕಾದ ತಯಾರಿಯನ್ನು ಅದಾಗಲೇ ಆರಂಭಿಸಲಾಗಿದೆ ಎಂದರು. 

ಇನ್ನು ಕೋಲ್ಕತ್ತಾ ಪಿಂಕ್ ಟೆಸ್ಟ್ ಪಂದ್ಯದಲ್ಲಿ ಪ್ರತಿ ನಿಮಿಷಕ್ಕೆ 15 ಟಿಕೆಟ್ ಗಳನ್ನು ಮಾರಾಟ ಮಾಡಿದ್ದೇವು. ಕೇವಲ 2 ಗಂಟೆಯಲ್ಲೇ ಆನ್ ಲೈನ್ ಟಿಕೆಟ್ ಮಾರಾಟವಾಗಿತ್ತು. ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ನೋಡಲು ಅಭಿಮಾನಿಗಳು ಇಚ್ಛಿಸುತ್ತಿರುವುದರಿಂದ ಮತ್ತಷ್ಟು ಪಂದ್ಯಗಳನ್ನು ಆಯೋಜಿಸವ ಕುರಿತು ಅರಿವಾಯಿತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com