ಕಿವೀಸ್ ನೆಲದಲ್ಲಿ ಐದು ಏಕದಿನ ಪಂದ್ಯದ ಸರಣಿಯಲ್ಲಿ ಭಾರತ ಇದಾಗಲೇ ಮೂರು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿದೆ. ಆದರೆ ನಾಲ್ಕನೇ ಪಂದ್ಯದಲ್ಲಿ ಧೋನಿ ಹಾಗೂ ನಾಯಕ ಕೊಹ್ಲಿ ಅಲಭ್ಯತೆ ಪರಿಣಾಮ ಟಿಂ ಇಂಡಿಯಾ ಎಂಟು ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. ಇದೀಗ ಐದನೇ ಪಂದ್ಯಕ್ಕೆ ಧೋನಿ ಪುನರಾಗಮನವಾಗಿದ್ದು ಟೀಂ ಇಂಡಿಯಾಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ.