ವೆಲ್ಲಿಂಗ್ಟನ್ ನಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಏಕಪಂದ್ಯದಲ್ಲಿ ಭಾರತ ತಂಡ 35 ರನ್ ಗಳ ಭರ್ಜರಿ ಗೆಲುವು ದಾಖಲಿಸಿತಾದರೂ, ಒಂದು ಹಂತದಲ್ಲಿ 4ನೇ ಪಂದ್ಯದಂತೆ ಈ ಪಂದ್ಯದಲ್ಲೂ ಭಾರತ ತಂಡ ಹೀನಾಯ ಸೋಲುವ ಕಾಣವು ಸಾದ್ಯತೆ ಇತ್ತು. ಕೇವಲ 18 ರನ್ ಗಳಿಗೆ ಭಾರತದ ಘಟಾನುಘಟಿ ಬ್ಯಾಟ್ಸಮನ್ ಗಳಾದ ರೋಹಿತ್ ಶರ್ಮಾ, ಶಿಖರ್ ಧವನ್, ಶುಭ್ ಮನ್ ಗಿಲ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕಳೆದುಕೊಂಡ ಭಾರತ ಹೀನಾಯ ಸ್ಥಿತಿಯಲ್ಲಿತ್ತು. ಆದರೆ ಈ ವೇಳೆ ಎಚ್ಚರಿಕೆಯ ಆಟವಾಡಿದ ಅಂಬಾಟಿ ರಾಯುಡು (90) ಮತ್ತು ವಿಜಯ್ ಶಂಕರ್ (45) ತಂಡಕ್ಕೆ ಆಸರೆಯಾದರು. ಇನ್ನು ಕೊನೆಯಲ್ಲಿ ಅಬ್ಬರಿಸುವ ಮೂಲಕ ಯುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ಮೊತ್ತವನ್ನು 250 ರ ಗಡಿ ದಾಟಿಸಿದರು.