ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಪಂದ್ಯದ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾಗೆ ಗೆಲ್ಲಲು 16 ರನ್ ಗಳ ಅವಶ್ಯಕತೆ ಇತ್ತು. ಈ ವೇಳೆ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ ಮೊದಲ ಎಸೆತದಲ್ಲಿ 2 ರನ್ ತೆಗೆದುಕೊಂಡರು. ನಂತರ 2ನೇ ಹಾಗೂ 3ನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳದೇ ತಾವೇ ಪಂದ್ಯದವನ್ನು ಗೆಲುವಿನ ನಾಗಾಲೋಟದಲ್ಲಿ ತೆಗೆದುಕೊಂಡು ಹೋಗುವುದಾಗಿ ಬಿಂಬಿಸಿಕೊಂಡರು.