ಅನುಜ್ ದೇಧಾ ಎಂಬುವವರನ್ನು 23 ವಯೋಮಿತಿ ತಂಡಕ್ಕೆ ಆಯ್ಕೆಗೆ ಪರಿಗಣಿಸಿರಲಿಲ್ಲ. ಈ ಕಾರಣದಿಂದಾಗಿ ಸೋಮವಾರ ಮಧ್ಯಾಹ್ನ ದೆಹಲಿ ಹಿರಿಯರ ತಂಡದ ಅಭ್ಯಾಸ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಏಕಾಏಕಿ ಅಂಗಳಕ್ಕೆ ನುಗ್ಗಿದ ಗುಂಪೊಂದು ಹಾಕಿ ಬ್ಯಾಟ್, ರಿವಾಲ್ವರ್ ಹಾಗೂ ರಾಡ್ಗಳ ಮೂಲಕ ಅಮಿತ್ ಭಂಡಾರಿ ಅವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿತ್ತು. ಭಂಡಾರಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಟಗಾರ ಅನೂಜ್ ಹಾಗೂ ಆತನ ಸಹೋದರ ನರೇಶ್ ಬಂಧಿಸಲಾಗಿತ್ತು.