ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಸಿಸಿಐ ನೀಡಿರುವ ಶೋಕಾಸ್ ನೋಟಿಸ್ ಗೆ ಹಾರ್ದಿಕ್ ಪಾಂಡ್ಯಾ ಪ್ರತಿಕ್ರಿಯೆ ನೀಡಿ ಬಹಿರಂಗ ಕ್ಷಮೆಯಾಚಿಸಿದ್ದರೂ, ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರಾಯ್ ಅವರು ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ 2 ಏಕದಿನ ಪಂದ್ಯಗಳ ನಿಷೇಧ ಹೇರುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಮಾತನಾಡಿದ ಅವರು ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ತಮಗೆ ಸಮಾಧಾನ ತಂದಿಲ್ಲ. ಓರ್ವ ವೃತ್ತಿಪರ ಕ್ರಿಕೆಟಿಗನಾಗಿ ಅವರ ಬಾಯಿಂದ ಇಂತಹ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ವಿನೋದ್ ರಾಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.