ಇನ್ನು ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ರಿಗೆ 2 ಏಕದಿನ ಪಂದ್ಯಗಳ ನಿಷೇಧ ಹೇರುವಂತೆ ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರಾಯ್ ಅವರು ಶಿಫಾರಸ್ಸು ಮಾಡಿದ್ದಾರೆಯಾದರೂ, ಆಡಳಿತ ಮಂಡಳಿ ಸದಸ್ಯೆ ಡಯಾನಾ ಎಡುಲ್ಜಿ ಅವರು ವಿಚಾರಣೆ ನಡೆಸಿ ಈ ಬಗ್ಗೆ ನಿರ್ಣಯ ಕೈಗೊಳ್ಳಲ್ಲಿದ್ದಾರೆ. ಮೂಲಗಳ ಪ್ರಕಾರ ಅಸಭ್ಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಡಳಿತ ಮಂಡಳಿ ಇಬ್ಬರೂ ಆಟಗಾರರ ಮೇಲೆ ತಿಂಗಳುಗಳ ಕಾಲ ನಿಷೇದ ಹೇರುವ ಸಾಧ್ಯತೆ ಇದೆ.